ಕಾಂಗ್ರೆಸ್ ಕಾರ್ಯಕರ್ತರನ್ನು ಕಾಪಾಡಿ!

Dharaneesh Bookanakere |

Feb 13, 2025 | Political Diary

Dharaneesh Bookanakere

Feb 13, 2025 | Political Diary

ಸಾಮಾನ್ಯವಾಗಿ ಕಾಂಗ್ರೆಸ್ ಎಲ್ಲಾ ವಿಷಯದಲ್ಲೂ ಹೀಗೇ ಮಾಡುತ್ತೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಸಂಬಂಧಿಸಿದ ಈ ಬೆಳವಣಿಗೆ ಕಾಂಗ್ರೆಸ್ ಪಕ್ಷದ ಆಂತರಿಕ ಸ್ಥಿತಿಗೆ ಹಿಡಿದ ಕನ್ನಡಿ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ‘ಕುಂಭಮೇಳಕ್ಕೆ ಹೋಗಿ ಮಿಂದೆದ್ದರೆ ಬಡತನ ನಿರ್ಮೂಲನೆ ಆಗುವುದಿಲ್ಲ’ ಎಂದು ಹೇಳಿದರು.

ಮಾಧ್ಯಮದವರು ಇದನ್ನು ವಿವಾದ ಮಾಡಿದಾಗಲೂ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಪ್ರಧಾನ ಮಂತ್ರಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ವಾಗ್ದಾಳಿ ನಡೆಸಿದಾಗಲೂ ಜಗ್ಗದ ಖರ್ಗೆ, ‘ನೀವು ಮಾಡಿರುವ ಪಾಪಕ್ಕೆ ಪ್ರಾಯಶ್ಚಿತ್ತವೇ ಇಲ್ಲ’ ಎಂದು ತಿರುಗೇಟು ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರ ಖಡಕ್ ಮಾತುಗಳಿಗೆ ಒಂದು ವರ್ಗ ಮೆಚ್ಚುಗೆಯನ್ನೂ ವ್ಯಕ್ತಪಡಿಸಿತು.

ಆದರೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿಯೂ ಆದ ಡಿಕೆ ಶಿವಕುಮಾರ್ ಕುಟುಂಬ(ಪಿಆರ್ ತಂಡವೂ ಸೇರಿದಂತೆ) ಸಮೇತರಾಗಿ ಕುಂಭಮೇಳಕ್ಕೆ ಹೋಗಿ ಸ್ನಾನ ಮಾಡಿದರು. ಪ್ರಯಾಗ್ ರಾಜ್ ನಲ್ಲಿ ಸುತ್ತಾಡುತ್ತಿರುವ, ಸ್ನಾನ ಮಾಡುತ್ತಿರುವ ಭಿನ್ನ ಭಿನ್ನ ಫೋಟೋಗಳನ್ನು ಮಾಧ್ಯಮಗಳಿಗೆ ತಲುಪಿಸಿ ಭರ್ಜರಿ ಪ್ರಚಾರ ಪಡೆದರು. ಇವರಿಬ್ಬರ ನಡುವೆ ಕಾಂಗ್ರೆಸ್ ಪಕ್ಷದ ಬಡ ಕಾರ್ಯಕರ್ತರ ಪಾಡೇನು? ಆತ ಯಾರ ವಿಚಾರಧಾರೆಯನ್ನು ಒಪ್ಪಿಕೊಳ್ಳಬೇಕು ಮತ್ತು ಪ್ರತಿಪಾದಿಸಬೇಕು?

ಇದರ ನಡುವೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯೂಟಿ ಖಾದರ್ ಕುಂಭಮೇಳಕ್ಕೆ ಹೋಗಿದ್ದು ಬಂದರು. ಉತ್ತರ ಪ್ರದೇಶ ಸ್ಪೀಕರ್ ಆಮಂತ್ರಣ ಎಂಬ ಚಂದನೆಯ ಸ್ಪಷ್ಟೀಕರಣ ಕೊಟ್ಟರು. ಈ ಬೆಳವಣಿಗೆ ಬೆನ್ನಲ್ಲೇ ವಿಧಾನಸಭೆಯ ಅರ್ಜಿ ಸಮಿತಿ ಹಾಗು ವಸತಿ ಸೌಕರ್ಯಗಳ ಸಮಿತಿಯ ಕೆಲ ಸದಸ್ಯರು ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬಳಿ ಕುಂಭಮೇಳಕ್ಕೆ ಹೋಗಲು ಮನವಿ ಮಾಡಿಕೊಂಡಿದ್ದಾರೆ. ಪ್ರಸ್ತಾಪ ಡೆಪ್ಯೂಟಿ ಸ್ಪೀಕರ್ ಕಚೇರಿಯಿಂದ ಸ್ಪೀಕರ್ ಕಚೇರಿಗೆ ಪರಿಶೀಲನೆ ಮಾಡಿ ಕ್ರಮಕೈಗೊಳ್ಳಲು ಶಿಫಾರಸ್ಸಾಗಿದೆ.

ಸ್ವತಃ ಕುಂಭಮೇಳಕ್ಕೆ ಹೋಗಿ ಬಂದಿರುವ ಸ್ಪೀಕರ್ ಯೂಟಿ ಖಾದರ್ ಶಾಸಕರಿಗೆ ಬೇಡ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಒಪ್ಪಿಗೆ ನೀಡಿದರೆ ಅರ್ಜಿ ಹಾಗು ವಸತಿ ಸೌಕರ್ಯ ಸಮಿತಿಗಳ ಒಟ್ಟು 28 ಶಾಸಕರಿಗೆ ಪ್ರವಾಸಭಾಗ್ಯ ಒದಗಿಬರಲಿದೆ. ಇದಕ್ಕೆ ಕೋಟ್ಯಂತರ ರೂಪಾಯಿ ಹಣವೂ ಖರ್ಚಾಗುತ್ತದೆ. ಅಭಿವೃದ್ಧಿ ಕಾರ್ಯಗಳಿಗೆ ದುಡ್ಡಿಲ್ಲ ಎಂದು ದೂರುವ ಶಾಸಕರು ಕುಂಭಮೇಳಕ್ಕೆ ಹೋದರೆ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದಂತೆ ‘ಬಡತನ ನಿರ್ಮೂಲನೆ’ಯಾಗುವುದೇ? ಅಥವಾ ರಾಜ್ಯದ ಹಿತದೃಷ್ಟಿಯಿಂದ ಹೋಗಬೇಡಿ ಎಂದು ಹೇಳುವ ನೈತಿಕತೆ ಡಿಕೆ ಶಿವಕುಮಾರ್ ಅವರಿಗೆ ಇದೆಯೇ? ಜನ ಈ ಬಗ್ಗೆ ಕೇಳಿದರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಏನು ಉತ್ತರ ಕೊಡಬೇಕು?

Recent Article

Comments

0 Comments

Submit a Comment

Your email address will not be published. Required fields are marked *

Related Article

11 ವೈದಿಕ, ಬ್ರಾಹ್ಮಣಶಾಹಿ ಸಂಸ್ಥೆಗಳಿಗೆ 2.5 ಕೋಟಿ ರೂ. ಬಿಡುಗಡೆ

11 ವೈದಿಕ, ಬ್ರಾಹ್ಮಣಶಾಹಿ ಸಂಸ್ಥೆಗಳಿಗೆ 2.5 ಕೋಟಿ ರೂ. ಬಿಡುಗಡೆ

ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಲಯದಡಿ ಬರುವ ವಿಶ್ವವಿದ್ಯಾಲಯಗಳಿಗೆ/ಸಂಸ್ಥೆಗಳಿಗೆ (ರಾಜ್ಯ ವಲಯದ ಯೋಜನೆಗಳು) ಸಂಬಂಧಿಸಿದಂತೆ 2025-26 ಸಾಲಿನ ಕಾರ್ಯಕ್ರಮಗಳ‌ ಅನುಷ್ಠಾನಕ್ಕೆ ಮೊದಲನೇ ತ್ರೈಮಾಸಿಕ ಅನುದಾನ ಬಿಡುಗಡೆ ವಿಷಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವೈದಿಕಶಾಹಿ ನೀತಿಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಕೊಂಚವೂ ಬದಲಾವಣೆ ಇಲ್ಲದಂತೆ ಮುಂದುವರೆಸಿದೆ.

read more
ಸ್ವಾಮೀಜಿಗಳನ್ನು ನಂಬಿ ರಾಜಕಾರಣ ಮಾಡುವವರು!

ಸ್ವಾಮೀಜಿಗಳನ್ನು ನಂಬಿ ರಾಜಕಾರಣ ಮಾಡುವವರು!

ಡಿಕೆ ಶಿವಕುಮಾರ್ ಅವರಿಗೆ ಸ್ವಾಮೀಜಿಗಳು ‘ನೀವು ಒಂದಲ್ಲಾ ಒಂದು ದಿನ ಮುಖ್ಯಮಂತ್ರಿ ಆಗೇ ಆಗುತ್ತೀರಿ’ ಎಂದಿದ್ದಾರಂತೆ. ಒಬ್ಬರಲ್ಲ, ಇಬ್ಬರಲ್ಲ ಮೂರ್ನಾಲ್ಕು ಸ್ವಾಮೀಜಿಗಳು ಹಾಗೆ ಹೇಳಿದ್ದಾರಂತೆ. ಅದರಿಂದಾಗಿ ಸಿದ್ದರಾಮಯ್ಯ ಅವರಿಂದ ಅಧಿಕಾರವನ್ನು ಕಿತ್ತುಕೊಳ್ಳುವುದು ಕಷ್ಟ ಎನ್ನುವುದು ಗೊತ್ತಿದ್ದರೂ, ತಮ್ಮ ವಿರುದ್ಧದ ಕಾನೂನು ಹೋರಾಟದ ಕುಣಿಕೆಗಳು ಬಿಗಿಯಾಗಬಹದು ಎಂಬ ಭಯವಿದ್ದರೂ ಡಿಕೆಶಿ ಸಿಎಂ ಆಗುವ ಪ್ರಯತ್ನವನ್ನು ನಿಲ್ಲಿಸಿಲ್ಲವಂತೆ. ಸಿಎಂ ಸ್ಥಾನವನ್ನು ಪಡೆದೇ ತಿರಬೇಕೆಂಬ ಹಠಕ್ಕೆ ಬಿದ್ದರೆ, ಅದೂ ಸಿಗದೆ ಜೊತೆಗೆ ಇರುವ ಕೆಪಿಸಿಸಿ ಕುರ್ಚಿಯನ್ನೂ ಕಳೆದುಕೊಳ್ಳಬೇಕಾದ ಸಂದರ್ಭ ಬರಬಹುದೆಂದು ಅರಿವಿದ್ದರೂ ಗುರಿಯಿಂದ ಹಿಂದೆ ಸರಿಯುತ್ತಿಲ್ಲವಂತೆ.

read more
ಕೇಂದ್ರದ ಬಜೆಟ್ ಕೂಡ ಹಲಾಲ್ ಬಜೆಟ್! ಹೇಗೆ ಗೊತ್ತಾ?

ಕೇಂದ್ರದ ಬಜೆಟ್ ಕೂಡ ಹಲಾಲ್ ಬಜೆಟ್! ಹೇಗೆ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 4.09 ಲಕ್ಷ ಕೋಟಿ ರೂಪಾಯಿಗಳ 16ನೇ ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 51 ಸಾವಿರ ಕೋಟಿ ಕೊಟ್ಟಿರುವುದು, 1.16 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿದ್ದರೂ ಹಣಕಾಸಿನ ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣೆ (FRBM) ಕಾಯ್ದೆ ಉಲ್ಲಂಘನೆ ಆಗದಂತೆ ಗಮನಹರಿಸಿರುವುದು, ಕೃಷಿ, ಸಮಾಜಕಲ್ಯಾಣ, ಆರೋಗ್ಯ, ಶಿಕ್ಷಣ ಇಲಾಖೆಗಳಿಗೆ ಹೆಚ್ಚಿನ ಅನುದಾನ ನೀಡಿರುವುದು, ಪಡೆದದ್ದಕ್ಕೆ ಪ್ರತಿಯಾಗಿ ಅಪಾರ ಪ್ರಮಾಣದ ತೆರಿಗೆಯನ್ನು ವಾಪಸ್ ನೀಡುವ ಬೆಂಗಳೂರಿಗೆ ಭರಪೂರ ಹಣ ಹರಿಸಿರುವುದು ಗಮನಾರ್ಹ ಸಂಗತಿಗಳು.

read more
Instagram
Instagram