ಉನ್ನತ ಶಿಕ್ಷಣ ಸಚಿವ ಸುಧಾಕರ್ ಗೆ ಮಾಹಿತಿ ಇಲ್ಲವೇ?
ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ವಲಯದಡಿ ಬರುವ ವಿಶ್ವವಿದ್ಯಾಲಯಗಳಿಗೆ/ಸಂಸ್ಥೆಗಳಿಗೆ (ರಾಜ್ಯ ವಲಯದ ಯೋಜನೆಗಳು) ಸಂಬಂಧಿಸಿದಂತೆ 2025-26 ಸಾಲಿನ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮೊದಲನೇ ತ್ರೈಮಾಸಿಕ ಅನುದಾನ ಬಿಡುಗಡೆ ವಿಷಯದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವೈದಿಕಶಾಹಿ ನೀತಿಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಕೊಂಚವೂ ಬದಲಾವಣೆ ಇಲ್ಲದಂತೆ ಮುಂದುವರೆಸಿದೆ.
ಒಟ್ಟು 2.5 ಕೋಟಿ ರೂಪಾಯಿ ಬಿಡುಗಡೆ ಮಾಡಿರುವ ಕುರಿತು ರಾಜ್ಯ ಸರ್ಕಾರ ‘ಕರ್ನಾಟಕ ಸರ್ಕಾರದ ನಡಾವಳಿಗಳು’ ಎಂದು ಸುತ್ತೋಲೆ ಪ್ರಕಟಿಸಿದೆ. ಇದರಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳು ಮತ್ತು ಅಕಾಡೆಮಿಗಳು ಒಳಗೊಂಡಿವೆ. ಅವುಗಳ ಜೊತೆಗೆ ಸಂಸ್ಕೃತ, ವೈದಿಕ ಸಂಶೋಧನಾ ಸಂಸ್ಥೆಗಳು ಅಡಿಯಲ್ಲಿ 11 ವೈದಿಕ, ಚಾತುರ್ವರ್ಣದ ಬ್ರಾಹ್ಮಣಶಾಹಿ ಸಂಸ್ಥೆಗಳಿಗೂ ಅನುದಾನ ಹಂಚಿಕೆ ಮಾಡಿದೆ. ಇದರ ದಾಖಲೆ (ಸುತ್ತೋಲೆ) Bookanakerediaryಗೆ ಲಭ್ಯವಾಗಿದೆ.
Bookanakerediaryಗೆ ಲಭ್ಯವಾಗಿರುವ ದಾಖಲೆಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವೈದಿಕಶಾಹಿ ನೀತಿಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಸ್ವಲ್ಪವೂ ಬದಲಾವಣೆ ಮಾಡದೆ ಮುಂದುವರೆಸಿರುವುದು ಸ್ಪಷ್ಟವಾಗಿ ತಿಳಿದುಬಂದಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಅವರಿಗೆ ತಮ್ಮ ಇಲಾಖೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವೈದಿಕಶಾಹಿ ನೀತಿಗಳನ್ನು ಯಥಾವತ್ತು ಮುಂದುವರೆಸಿರುವ ಕುರಿತು ಮಾಹಿತಿ ಇಲ್ಲವೇ? ಅಥವಾ ಗೊತ್ತಿದ್ದೂ ಒಪ್ಪಿಕೊಂಡು ಮುಂದುವರಿಸಿದ್ದಾರೆಯೇ? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.
ಹಾಗೆಯೇ ಕೇಂದ್ರದ ಶಿಕ್ಷಣ ನೀತಿ ಕೇಸರೀಕರಣವಾಗಿದೆ ಎಂದು ರಾಜ್ಯ ಸರ್ಕಾರ ತನ್ನದೆಯಾದ ಪ್ರತ್ಯೇಕ ಶಿಕ್ಷಣ ನೀತಿಯನ್ನು ರೂಪಿಸುತ್ತಿದ್ದು ಆ ಕೆಲಸದಲ್ಲಿ ನಿರತರಾಗಿರುವವರು ಹಿಂದಿನ ಬಿಜೆಪಿ ಸರ್ಕಾರ ಮಾಡಿದಂತೆ 11 ವೈದಿಕ, ಚಾತುರ್ವರ್ಣದ ಬ್ರಾಹ್ಮಣಶಾಹಿ ಸಂಸ್ಥೆಗಳಿಗೆ ಅನುದಾನ ನೀಡುವುದನ್ನು ಒಪ್ಪುವರೇ? ಎನ್ನುವ ಪ್ರಶ್ನೆಯನ್ನು ಹುಟ್ಟುಹಾಕಿದೆ.
![]()

0 Comments